Professional Documents
Culture Documents
ಭಗವದ್ಗೀತೆಯ ತಾತ್ಪರ್ಯ
ಭಗವದ್ಗೀತೆಯ ತಾತ್ಪರ್ಯ
ಭಗವದ್ಗೀತೆಯ ತಾತ್ಪರ್ಯ
1
ಅಧ್ಯಾಯ 6: ಧ್ಯಾನಸಾಧಕನಿಗೆ ಕರ್ಮ ಸಾಧನೆ ಸಾಧ್ಯ
ಧ್ಯಾನದ ಕುರಿತು ಇಲ್ಲಿ ಕೃಷ್ಣ ಹೇಳುತ್ತಾನೆ. ಧ್ಯಾನವನ್ನು ಅಭ್ಯಾಸ ಮಾಡುವವನು ಏಕಾಂಗಿಯಾಗಿ, ದೇಹವನ್ನೂ ಮನಸ್ಸನ್ನೂ
ಬಿಗಿಹಿಡಿದು, ಮನಸ್ಸನ್ನು ಪರಮಾತ್ಮನಲ್ಲಿ ಕೂಡಿಸಿಕೊಂಡಿರಬೇಕು. ಪ್ರಯತ್ನದಿಂದಲೇ ಇಂದ್ರಿಯಗಳನ್ನೂ, ಮನಸ್ಸನ್ನು
ಗೆಲ್ಲಬೇಕು ಎನ್ನುತ್ತಾನೆ.
2
ಅಧ್ಯಾಯ 14: ನಿನ್ನದೃಷ್ಟಿಕೋನಕ್ಕೆ ಹೊಂದುವ ಜೀವನಶೈಲಿ ಅಳವಡಿಸಿಕೋ
ಎಲ್ಲರಲ್ಲೂ ಮೂರು ಗುಣಗಳಿರುತ್ತವೆ. ಸಾತ್ವಿಕ ಗುಣವು ಬೆಳಕಿನ, ಸುಖದ, ವಿಚಾರದ ರೂಪ, ರಜೋಗುಣವು ಪ್ರೀತಿ, ಬಯಕೆ
ಅಹಂಕಾರದ ಕ್ರಿಯಾಶೀಲ ರೂಪ, ತಮವು ಅಜ್ಞಾನ, ತಪ್ಪು ತಿಳುವಳಿಕೆ, ಆಲಸ್ಯದ ರೂಪ. ಇವುಗಳಲ್ಲಿ ಶಕ್ತವಾದ ಗುಣ
ಆತ್ಮವನ್ನು ಕಟ್ಟಿಹಾಕುತ್ತದೆ. ಎಲ್ಲರಲ್ಲಿಯೂ ಇಷ್ಟೂ ಗುಣಗಳಿದ್ದರೂ ಒಂದು ಗುಣ ಮೇಲುಗೈ ಸಾಧಿಸುವುದು. ಸಾತ್ವಿಕ
ಗುಣದವನು ಮೋಕ್ಷ, ರಾಜಸಿಕ ಗುಣದವನು ಪುನರ್ಜನ್ಮ ಹಾಗೂ ತಾಮಸಿಕ ಗುಣದವನು ಕೆಳಮಟ್ಟದ ಜನ್ಮವೆತ್ತುತ್ತಾನೆ
ಎಂದು ಕೃಷ್ಣ ಹೇಳುತ್ತಾನೆ.
ಅಧ್ಯಾಯ 16 : ಉತ್ತಮನಾಗಿರುವುದೇ ವರ
ಸಿಟ್ಟು, ಕ್ರೂರತೆ, ಅಜ್ಞಾನ, ಅಪ್ರಾಮಾಣಿಕತೆ, ಅತಿಯಾಸೆ, ಅನೈತಿಕತೆ, ಅಹಂಕಾರ ಮುಂತಾದವು ವ್ಯಕ್ತಿಯನ್ನು
ಆಧ್ಯಾತ್ಮಿಕವಾಗಿ ನಾಶ ಮಾಡುತ್ತವೆ. ಆದರೆ ಮಾನವೀಯತೆ, ಸತ್ಯ, ಅಹಿಂಸೆ, ತಾಳ್ಮೆ, ಇಂದ್ರಿಯಗಳ ನಿಯಂತ್ರಣ
ಮುಂತಾದ ಸದ್ಗುಣಗಳು ಜ್ಞಾನಕ್ಕೆ ಕಾರಣವಾಗಿ ಸ್ವತಂತ್ರರನ್ನಾಗಿಸುತ್ತದೆ.