Professional Documents
Culture Documents
ನೇಮಿಚಂದ್ರ (ಲೇಖಕಿ) - ವಿಕಿಪೀಡಿಯ
ನೇಮಿಚಂದ್ರ (ಲೇಖಕಿ) - ವಿಕಿಪೀಡಿಯ
ಭಾಷೆ ಕನ್ನಡ
ರಾಷ್ಟ್ರೀಯತೆ ಭಾರತೀಯ
ವಿದ್ಯಾಭ್ಯಾಸ ಬಿ ಇ (ನ್ಯಾಷನಲ್
ಇನ್ಸ್ಟಿಟ್ಯೂಟ್ ಆಫ್
ಎಂಜಿನಿಯರಿಂಗ್,
ಮೈಸೂರು), ಎಂ.ಎಸ್.
ಪದವಿ(ಭಾರತೀಯ
ವಿಜ್ಞಾನ ಸಂಸ್ಥೆ)
ತಾಯಿ ತಿಮ್ಮಕ್ಕ
ಜೀವನ
ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗದಲ್ಲಿ
ಜುಲೈ ೧೬, ೧೯೫೯ರಂದು ಜನಿಸಿದರು. ತಂದೆ ಪ್ರೊ.
ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ
ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್
ಇನ್ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್ನಿಂದ ಬಿ.ಇ.
ಪದವಿ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್
ಆಫ್ ಸೈನ್ಸ್ನಿಂದ ಎಂ.ಎಸ್. ಪದವಿ. ಬೆಂಗಳೂರಿನ
ಎಚ್.ಎ.ಎಲ್ ಸಂಸ್ಥೆಯಲ್ಲಿ ಉನ್ನತ ತಂತ್ರಜ್ಞ
ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.[೧]
ಕನ್ನಡದಲ್ಲಿ ಚಿಂತನಪೂರ್ಣ ಲೇಖನ, ಪುಸ್ತಕಗಳನ್ನು
ಬರೆಯುತ್ತಿದ್ದಾರೆ.
ಬರಹದ ಬದುಕು
ನೇಮಿಚಂದ್ರ ಅವರು ಮೂರು ದಶಕಗಳಿಗೂ
ಹೆಚ್ಚು ಕಾಲದಿಂದ ತಮ್ಮ ವೈಶಿಷ್ಟ್ಯಪೂರ್ಣ
ಬರಹಗಳನ್ನು ನೀಡುತ್ತಾ ಬಂದಿದ್ದಾರೆ.
‘ನೇಮಿಚಂದ್ರರ ಕಥೆಗಳು’ ಒಂದು ದೊಡ್ಡ
ಸಂಕಲನವಾಗಿ ಹೊರಬಂದಿದೆ. ಹಿಂದೆ ಬಿಡಿ
ಸಂಕಲನಗಳಾಗಿ ‘ನಮ್ಮ ಕನಸುಗಳಲ್ಲಿ ನೀವಿದ್ದೀರಿ’,
‘ಮತ್ತೆ ಬರೆದ ಕಥೆಗಳು’, ‘ಕಳೆಯ ಬೇಕಿದೆ ನಿನ್ನ
ಜೊತೆಯಲಿ ಒಂದು ಶ್ಯಾಮಲ ಸಂಜೆ’ ಇತ್ಯಾದಿ
ರೂಪಗಳಲ್ಲಿ ಬಂದ ಈ ಸಂಕಲನದಲ್ಲಿನ ಕಥೆಗಳು
ಓದುಗರನ್ನು ಅಪಾರವಾಗಿ ಸೆಳೆದಿವೆ.
ನೇಮಿಚಂದ್ರರ ಕಾದಂಬರಿಗಳೂ ಜನಪ್ರಿಯತೆ
ಗಳಿಸಿಕೊಂಡಿವೆ. ವಿಜ್ಞಾನದ ವಸ್ತುಗಳನ್ನು
ಒಳಗೊಂಡ ಅವರ ಕಥಾ ಹರಹು ಕನ್ನಡ ಸಾಹಿತ್ಯ
ಲೋಕಕ್ಕೇ ಒಂದು ಮೆರುಗು ತಂದಿದೆ. ಯಾವುದೇ
ಒಂದು ಕಥಾ ವಸ್ತುವನ್ನು ರೂಪಿಸುವಾಗ ಅದರ
ಹಿನ್ನೆಲೆಯನ್ನು ಅತ್ಯಂತ ಸನಿಹದಲ್ಲಿ ಅನುಭವಿಸಿ
ಬರೆಯುವುದಕ್ಕಾಗಿ ಅವರು ನಡೆಸಿದ ತಿರುಗಾಟ
ಮತ್ತು ಅಭಿವ್ಯಕ್ತಿಸಿರುವ ರೀತಿ ಅಚ್ಚರಿ
ಹುಟ್ಟಿಸುವಂತದ್ದು. ಮೆಚ್ಚುವಂತದ್ದು. ಇದಕ್ಕೊಂದು
ಉದಾಹರಣೆ ಕನ್ನಡಿಗರ ಮಾನಸದಲ್ಲಿ
ಭಿತ್ತಿಗೊಂಡಿರುವ ನೇಮಿಚಂದ್ರರ ‘ಯಾದ್
ವಶೇಮ್’. ಮಹಾಯುದ್ಧ ಕಾಲದ ಹಿನ್ನೆಲೆಯನ್ನು
ಇಟ್ಟುಕೊಂಡು ಚಿತ್ರಿತವಾಗಿರುವ ಈ ಕಥೆಯಲ್ಲಿನ
ಹುಡುಗಿ ಅಂದಿನ ನಾಜಿ ರಕ್ಕಸರ ಕೈಯಿಂದ
ತಪ್ಪಿಸಿಕೊಂಡು ನಮ್ಮ ಹಳೆಯ ಬೆಂಗಳೂರಿನಲ್ಲಿ
ಬೆಳೆಯುತ್ತಾಳೆ. ತನ್ನ ಕಳೆದುಹೋದ
ಕುಟುಂಬವನ್ನು ಅರಸುತ್ತ ಹೊರಟ ಈ ಹುಡುಗಿ
ಜರ್ಮನಿ, ಅಮೆರಿಕವನ್ನು ಸುತ್ತಿ, ಕಡೆಗೆ
ಯುದ್ಧಗ್ರಸ್ಥವಾದ ಇಸ್ರೇಲ್ - ಪ್ಯಾಲೆಸ್ಟೇನಿನ
ವಾತಾವರಣದಲ್ಲಿ ಬಂದಿಳಿಯುವುದು
ಚಿಂತನಪೂರ್ಣ ಮತ್ತು ಅದು ಓದಿಸಿಕೊಂಡು
ಹೋಗುವ ರೀತಿಯಲ್ಲಿಯೇ ಹೇಳುವುದಾದರೆ
ರೋಚಕ ಚಿತ್ರಣವಾಗಿದೆ. ಇದಕ್ಕಾಗಿ
ನೇಮಿಚಂದ್ರರು ಸಂಬಂಧಪಟ್ಟ ದೇಶಗಳಿಗೆ,
ಸ್ಥಳಗಳಿಗೆ ಅಲೆದಿದ್ದಾರೆ.
ನೇಮಿಚಂದ್ರರ ವೈಜ್ಞಾನಿಕ ಬರಹಗಳಲ್ಲಿ ಜೀವನ
ಚರಿತ್ರೆಗಳು ವಿಶೇಷವೆನಿಸುತ್ತವೆ. ‘ಮೇರಿ ಕ್ಯೂರಿ’,
ವೆಲ್ಲೂರು ಆಸ್ಪತ್ರೆಯ ಸಂಸ್ಥಾಪಕರಾದ ‘ಡಾ.
ಇದಾಸ್ಕಡರ್’, ‘ಥಾಮಸ್ ಆಲ್ವ ಎಡಿಸನ್’,
‘ನೊಬೆಲ್ ವಿಜೇತ ಮಹಿಳೆಯರು’, ‘ಮಹಿಳಾ
ವಿಜ್ಞಾನಿಗಳು’ ಜನಪ್ರಿಯವೆನಿಸಿವೆ.
ನೇಮಿಚಂದ್ರರ ಚಿಂತನಶೀಲ ಮನಸ್ಸು
ವೈವಿಧ್ಯಪೂರ್ಣವಾಗಿದ್ದು ಸಾಮಾಜಿಕ
ಚಿಂತನೆಗಳಲ್ಲೂ ಅಪಾರವಾದ ಪಾತ್ರ ನಿರ್ವಹಿಸಿವೆ.
‘ಹೋರಾಟದ ಹಾದಿಯಲ್ಲಿ ಧೀಮಂತ
ಮಹಿಳೆಯರು’ ಈ ನಿಟ್ಟಿನಲ್ಲಿ ಒಂದು ಗಮನಾರ್ಹ
ಕೃತಿ. ‘ನನ್ನ ಕಥೆ-ನಮ್ಮ ಕಥೆ’ ಎಂಬುದು
ಮಹಿಳೆಯೊಬ್ಬಳು ಮನೆಯಲ್ಲಿನ ದೌರ್ಜನ್ಯದ
ವಿರುದ್ಧ ಬಂಡೇಳುವ ಕಥೆಯೊಂದರ
ಅನುವಾದವಾಗಿದೆ.
ಹೇಮಲತಾ ಮಹಿಷಿ ಅವರೊಡನೆ ಅವರು
ನಿರೂಪಿಸಿರುವ ‘ನ್ಯಾಯಕ್ಕಾಗಿ ಕಾದ ಭಾಂವ್ರಿ
ದೇವಿ’ ಪುಸ್ತಕವು ಬಾಲ್ಯವಿವಾಹವನ್ನು ತಡೆಗಟ್ಟುವ
ನಿಟ್ಟಿನಲ್ಲಿ ತಾನು ಮಾಡಿದ ಆರೋಗ್ಯಪೂರ್ಣ
ಸಮಾಜ ನಿರ್ಮಾಣದ ಕೆಲಸಕ್ಕಾಗಿ, ರಾಕ್ಷಸೀಯ
ದೌರ್ಜನ್ಯಕ್ಕೆ ಬಲಿಯಾದ ಭಾಂವ್ರಿ ದೇವಿ ಅವರು
ನ್ಯಾಯಕ್ಕಾಗಿ ಕಾದು ಕುಳಿತ ಕಥೆ. ನಮ್ಮ
ಸಮಾಜದ ಹಿತ್ತಲಿನ ಸಾಮ್ರಾಜ್ಯದ ಕರಾಳತೆಯನ್ನು
ರಾಚಿಸುವಂತಿದೆ.
ಸ್ವಾತಂತ್ರ ಪೂರ್ವದ ಕನ್ನಡದ ಮಹಾನ್ ಕವಯತ್ರಿ
‘ಬೆಳೆಗೆರೆ ಜಾನಕಮ್ಮ’, ‘ನೋವಿಗದ್ದಿದ ಕುಂಚ’
ಎಂಬ ಮಹಾನ್ ಡಚ್ ಕಲಾವಿದ ವ್ಯಾನ್ ಗೋನ
ಅವರ ಜೀವನ ಚರಿತ್ರೆ ಇವೆಲ್ಲಾ ನೇಮಿಚಂದ್ರ
ಇನ್ನಿತರ ವಿಶಾಲ ಆಸಕ್ತಿಗಳನ್ನು ತೋರುತ್ತವೆ.
*‘ಒಂದು ಕನಸಿನ ಪಯಣ’, ‘ಪೆರುವಿನ ಪವಿತ್ರ
ಕಣಿವೆಯಲ್ಲಿ’ ಕೃತಿಗಳು ನೇಮಿಚಂದ್ರರ ಪ್ರವಾಸ
ಕಥನಗಳಾಗಿವೆ.
ನೇಮಿಚಂದ್ರರ ವಿಚಾರ ಪೂರ್ಣ ಲೇಖನಗಳಾದ
‘ಸಾಹಿತ್ಯ ಮತ್ತು ವಿಜ್ಞಾನ’, ‘ಬದುಕು
ಬದಲಿಸಬಹುದು’, ‘ದುಡಿವ ಹಾದಿಯಲ್ಲಿ
ಜೊತೆಯಾಗಿ’, ‘ಮಹಿಳಾ ಅಧ್ಯಯನ’, ‘ನಿಮ್ಮ
ಮನೆಗೊಂದು ಕಂಪ್ಯೂಟರ್, ‘ಎಲೆಕ್ಟ್ರಾನಿಕ್ಸ್ ಮತ್ತು
ಕಂಪ್ಯೋಟರ್ಸ್’ , ‘ಮಹಿಳಾ ಲೋಕ’ (ಸಂಪಾದಿತ)
ಇವೆಲ್ಲಾ ನೇಮಿಚಂದ್ರರ ಚಿಂತನಪೂರ್ಣ ಬರಹಗಳ
ಮತ್ತಷ್ಟು ವಿಶಾಲತೆ, ಆಳ, ಬದುಕಿನ ಕುರಿತಾದ
ವಿಶಾಲ ದೃಷ್ಟಿಗಳನ್ನು ಅಭಿವ್ಯಕ್ತಿಸುತ್ತವೆ.
ನೇಮಿಚಂದ್ರರು 'ತರಂಗ' ಮುಂತಾದ
ನಿಯತಕಾಲಿಕೆಗಳಲ್ಲಿ ಆಗಾಗ ನಡೆಸಿರುವ
ಸಂದರ್ಶನ ಲೇಖನಗಳು, ‘ಉದಯವಾಣಿ’
ಮುಂತಾದ ಪತ್ರಿಕೆಗಳಲ್ಲಿ ಮೂಡುತ್ತಿರುವ
ಅಂಕಣಗಳು ಕೂಡಾ ಸುದೀರ್ಘ ವ್ಯಾಪ್ತಿಯ
ಆಳದ್ದಾಗಿವೆ.
ಸಾಹಿತ್ಯ/ಕೃತಿಗಳು
ಕಾದಂಬರಿ
ಕಥಾಸಂಕಲನ
ಜೀವನ ಚರಿತ್ರೆ
ಪ್ರವಾಸ ಕಥನ
ಇತರೆ
ನೋಡಿ
ಉಲ್ಲೇಖಗಳು
ಉಲ್ಲೇಖಗಳು
ಹೊರಕೊಂಡಿಗಳು
ನೇಮಿಚಂದ್ರ (http://kanaja.in/archives/din
amani/%E0%B2%A8%E0%B3%87%E0%B
2%AE%E0%B2%BF%E0%B2%9A%E0%B
2%82%E0%B2%A6%E0%B3%8D%E0%B
2%B0) Archived (https://web.archive.or
g/web/20160315122424/http://kanaja.i
n/archives/dinamani/%e0%b2%a8%e0%
b3%87%e0%b2%ae%e0%b2%bf%e0%b
2%9a%e0%b2%82%e0%b2%a6%e0%b3%
8d%e0%b2%b0) 2016-03-15 ವೇಬ್ಯಾಕ್
ಮೆಷಿನ್ ನಲ್ಲಿ.- 'ಕಣಜ' ಮಾಹಿತಿಕೋಶ
Nemichandra's Peru Travelogue (http://w
ww.kamat.com/jyotsna/blog/blog.php?
BlogID=718) , Kamat's Potpourri
"https://kn.wikipedia.org/w/index.php?
title=ನೇಮಿಚಂದ್ರ_(ಲೇಖಕಿ)&oldid=1170007" ಇಂದ
ಪಡೆಯಲ್ಪಟ್ಟಿದೆ