Professional Documents
Culture Documents
ಜನ್ನ - ವಿಕಿಪೀಡಿಯ
ಜನ್ನ - ವಿಕಿಪೀಡಿಯ
ತಂದೆ ತಾಯಿಗಳು :
ಈತನ ತಂದೆ ಶಂಕರ(ಕವಿ ಸುಮನೋಬಾಣ)ನು
ಹೊಯ್ಸಳ ನರಸಿಂಹನಲ್ಲಿ ದಂಡಾಧೀಶನಾಗಿದ್ದನು ;
ತಾಯಿ ಗಂಗಾದೇವಿ. ಕನ್ನಡದ ಬಹುಮುಖ್ಯ
ಕಾವ್ಯಸಂಕಲನ ಗ್ರಂಥವಾದ
ಸೂಕ್ತಿಸುಧಾರ್ಣವವನ್ನು ರಚಿಸಿದ
ಮಲ್ಲಿಕಾರ್ಜುನನಿಗೆ(ಕ್ರಿ.ಶ.೧೨೪೫) ಜನ್ನನ
ತಂಗಿಯನ್ನು ಕೊಟ್ಟು
ಮದುವೆಯಾಗಿತ್ತು.ಶಬ್ದಮಣಿದರ್ಪಣವನ್ನು ರಚಿಸಿದ
ವಯ್ಯಾಕರಣಿ ಕೇಶಿರಾಜನು ಜನ್ನನ
ಸೋದರಳಿಯ(ಮಲ್ಲಿಕಾರ್ಜುನನ ಮಗ).ಈತನು
ಹೊಯ್ಸಳ ವೀರಬಲ್ಲಾಳನ
ಮಹಾಮಂತ್ರಿಯೂ,ಸೈನ್ಯಾಧಿಪತಿಯೂ,ಆಸ್ಥಾನಕವಿ
ಯೂ ಆಗಿದ್ದನು.ವೀರಬಲ್ಲಾಳನ ನಂತರ ಪಟ್ಟಕ್ಕೆ
ಬಂದ ೨ನೆಯ ನರಸಿಂಹನ ಕಾಲದಲ್ಲೂ ಜನ್ನನು
ಆಸ್ಥಾನಕವಿಯಾಗಿ ಮುಂದುವರಿದನು.[೫][೬]
ಜನ್ನನ ರಚನೆಗಳು
ಅನುಭವಮುಕುರವೆಂಬ ಕಾಮಶಾಸ್ತ್ರ
ಸಂಬಂಧವಾದ ಕೃತಿಯನ್ನೂ ಯಶೋಧರ ಚರಿತೆ,
ಅನಂತನಾಥಪುರಾಣ ಎಂಬ ಎರಡು ಕಾವ್ಯಗಳನ್ನೂ
ಬರೆದಿದ್ದಾನೆ. ಜನ್ನ. ಕೆಲವು ಶಾಸನಗಳೂ ಈತನಿಂದ
ರಚಿತವಾಗಿವೆ.[೯]
ಯಶೋಧರಚರಿತೆ
ಯಶೋಧಚರಿತೆ, ಅನಂತನಾಥ ಪುರಾಣ ಎರಡೂ
ಧಾರ್ಮಿಕ ಕೃತಿಗಳು. ಆದರೆ ಯಶೋಧರಚರಿತೆಯಲ್ಲಿ
ಲೌಕಿಕದ ನೆಲೆಗಟ್ಟು ಇಲ್ಲದಿಲ್ಲ. ಯಶೋಧರಚರಿತೆ
ಬಹುಸುಂದರವಾದ ಪುಟ್ಟಕಾವ್ಯ. ಕೇವಲ ನಾಲ್ಕು
ಅವತಾರಗಳೂ 310 ಪದ್ಯಗಳೂ ಇದರಲ್ಲಿವೆ. ಬರಿಯ
ಕಂದಪದ್ಯಗಳಿಂದಲೇ ರಚಿತವಾಗಿರುವುದು ಈ
ಕೃತಿಯ ವಿಶಿಷ್ಟತೆ. ಇದಕ್ಕೆ ಮೂಲ, ಸಂಸ್ಕೃತದಲ್ಲಿ
ವಾದಿರಾಜ (11ನೆಯ ಶ.) ಬರೆದಿರುವ ಯಶೋಧರ
ಚರಿತೆ. ಅದಕ್ಕಿಂತಲೂ ಹಿಂದೆ ಪ್ರಭಂಜನ, ಹರಿಭದ್ರ,
ಸೋಮದೇವ ಮುಂತಾದ ಪ್ರಾಕೃತ ಸಂಸ್ಕೃತ
ಕವಿಗಳು ಯಶೋಧರನ ಕತೆಯನ್ನು ನಿರೂಪಿಸಿದ್ದರು.
ಮೂಲತಃ ಅದೊಂದು ಜನಪದ ಕತೆಯಿರಬೇಕು.
ಹಿಂದಿನವರಲ್ಲಿ ಬಹುಮಟ್ಟಿಗೆ ಧಾರ್ಮಿಕ ಸ್ವರೂಪದ
ಕತೆಯಷ್ಟೆ ಆಗಿದ್ದ ಯಶೋಧರಾಖ್ಯಾನವನ್ನು
ತೆಗೆದುಕೊಂಡು ಆದರೆ ಅಸಂಗತಾಂಶಗಳನ್ನು
ನಿವಾರಿಸಿ ಉಚಿತ ಮಾರ್ಪಾಡುಗಳನ್ನು
ಮಾಡಿಕೊಂಡು ಅದನ್ನೊಂದು ಸರಳರಮ್ಯವಾದ,
ಮಾನವೀಯ ಸ್ವಾರಸ್ಯವುಳ್ಳ ಕಾವ್ಯವನ್ನಾಗಿ
ಪರಿವರ್ತಿಸಿದವ ವಾದಿರಾಜ. ಅವನ ಕಾವ್ಯಕ್ಕೆ
ಸಂಸ್ಕøತದಲ್ಲಿ ಯಾವ ವೈಶಿಷ್ಟ್ಯವಿದೆಯೋ ಅದೇ
ವೈಶಿಷ್ಟ್ಯ ಕನ್ನಡದಲ್ಲಿ ಜನ್ನನ ಕೃತಿಗಿದೆ.
ಯೋಶೋಧರಚರಿತೆಯಲ್ಲಿ ಅಮೃತಮತಿಯ
ಅಧಾರ್ಮಿಕ ವಿಕೃತ ಪ್ರಣಯದ ಕತೆಯೊಂದು
ಪೂರಕವಾಗಿ ಸೇರಿಕೊಂಡಿದೆ. ಅದರಲ್ಲಿ ಬರುವ
ಸಮಸ್ಯೆ ಸಾಮಾಜಿಕವಾದುದು,
ನಿತ್ಯನೂತನವಾದುದು, ಕವಿ ಅದನ್ನು
ವೈರಾಗ್ಯಪ್ರಚೋದನೆಗೆ, ಧರ್ಮ ಬೋಧನೆಗೆ
ಬಳಸಿಕೊಂಡಿದ್ದಾನಾದರೂ ಅದನ್ನು ಪ್ರತ್ಯೇಕಿಸಿ
ನೋಡುವುದು ಸಾಧ್ಯ. ಮನಸಿಜನ ಮಾಯೆ
ವಿಧಿವಿಳಸನದ ನೆರಂಬಡೆಯೆ ಕೊಂದು ಕೂಗದೆ
ನರರಂ- ಎಂಬುದು ಇಲ್ಲಿ ಜನ್ನನ ಕಾಣ್ಕೆ.
ಒಟ್ಟಿನ ಮೇಲೆ ಮಾನವ ಸ್ವಭಾವದ ಸಂಕೀರ್ಣತೆಯ
ಅರಿವು, ಸ್ವಾರಸ್ಯಪೂರ್ಣವೂ ಸಂಕ್ಷಿಪ್ತವೂ ಆದ
ನಿರೂಪಣೆ, ಸರಳ ಸಮುಚಿತವಾದ ಅಲಂಕಾರಗಳು,
ದೇಸಿಯ ಬೆಡಗು ಬಿನ್ನಾಣಗಳು-ಈ ಗುಣಗಳಿಂದ
ಕೂಡಿರುವ ಯಶೋಧರಚರಿತೆ ಕನ್ನಡದಲ್ಲಿ ಒಂದು
ವಿರಳವರ್ಗದ ಕಾವ್ಯವಾಗಿದೆ; ಧರ್ಮ,
ಕಾವ್ಯಧರ್ಮಗಳ ಸಮನ್ವಯಕ್ಕೆ ಒಳ್ಳೆಯ
ನಿದರ್ಶನವಾಗಿದೆ.[೧೦]
ಅನಂತನಾಥಪುರಾಣ
ಅನಂತನಾಥಪುರಾಣ 14ನೆಯ ತೀರ್ಥಂಕರನಾದ
ಅನಂತನಾಥನ ಕತೆಯನ್ನು ಬಣ್ಣಿಸುವ 14
ಆಶ್ವಾಸಗಳ ಪ್ರೌಢ ಚಂಪೂ ಕಾವ್ಯ. ಇದಕ್ಕೆ
ಮುಖ್ಯವಾದ ಆಕರ ಗುಣಭದ್ರಾಚಾರ್ಯರು
ಸಂಸ್ಕೃತದಲ್ಲಿ ರಚಿಸಿರುವ ಉತ್ತರಪುರಾಣ. ಅಲ್ಲಿ
ಕಿರಿದಾಗಿ ಬರುವ ಅನಂತನಾಥನ ಕತೆಯನ್ನು ಜನ್ನ
ಎಳೆದು ಹಿಗ್ಗಲಿಸಿ 14 ಆಶ್ವಾಸಗಳಷ್ಟು ದೊಡ್ಡದು
ಮಾಡಿದ್ದಾನೆ. ಈ ಕಾವ್ಯ ಸಂಪ್ರದಾಯದ ಪ್ರಭಾವಕ್ಕೆ
ವಿಶೇಷವಾಗಿ ಪಕ್ಕಾಗಿದೆ. ವಿದ್ವತ್ತಿನ ಪ್ರದರ್ಶನ,
ಮಾತಿನ ಆಡಂಬರ, ಅಲಂಕಾರಗಳ ಜಟಿಲತೆ,
ಮತೀಯ ಪ್ರಕ್ರಿಯೆಗಳ ಆಧಿಕ್ಯ, ಅನಾವಶ್ಯಕ
ವರ್ಣನೆಗಳು, ಔಚಿತ್ಯ ಪ್ರಜ್ಞೆಯ ಕೊರತೆ-ಇವು ಇದರಲ್ಲಿ
ಎದ್ದುಕಾಣುವ ಲಕ್ಷಣಗಳು. ಹೀಗಾಗಿ ಈ ಕೃತಿ
ರಸವತ್ತಾದ ಕವಿತೆಯಾಗುವುದರ ಬದಲು
ಬಹುಮಟ್ಟಿಗೆ ಶುಷ್ಕವಾದ ಪುರಾಣವಾಗಿ
ಪರಿಣಮಿಸಿದೆ. ಆದರೆ ಇದರಲ್ಲಿ ಅಂತರ್ಗತವಾಗಿರುವ
ಚಂಡಶಾಸನನ ಉಪಾಖ್ಯಾನ ಒಂದು
ಹೃದಯಂಗಮವಾದ ಭಾಗ. ಪ್ರತ್ಯೇಕಿಸಿದರೆ
ಅದೊಂದು ಉಜ್ಜ್ವಲವಾದ ಖಂಡಕಾವ್ಯವಾಗುತ್ತದೆ.
ಜಿನಕಥೆಗೂ ಅದಕ್ಕೂ ಸಾವಯವ ಸಂಬಂಧವೇನೂ
ಇಲ್ಲ. ಉತ್ತರ ಪುರಾಣದಲ್ಲಿ ಬಿಂದುರೂಪವಾಗಿ
ಬರುವ ಕತೆಯನ್ನು ಇಲ್ಲಿ ಜನ್ನ ಸೊಗಸಾಗಿ
ವಿಸ್ತರಿಸಿದ್ದಾನೆ.[೧೧]
ಪ್ರಾಮುಖ್ಯತೆ
ಯಶೋಧರಚರಿತೆಯಲ್ಲಿ ಹೆಣ್ಣಿನ ನಿಷಿದ್ಧಕಾಮ
ಚಿತ್ರಿತವಾಗಿದ್ದರೆ ಚಂಡಶಾಸನ ವೃತ್ತಾಂತದಲ್ಲಿ ಗಂಡಿನ
ದುರಂತ ವ್ಯಾಮೋಹ ನಿರೂಪಿತವಾಗಿದೆ. ಸುಮಾರು
80 ಪದ್ಯಗಳಷ್ಟು ಚಿಕ್ಕದಾದರೂ ಈ ಉಪಾಖ್ಯಾನ
ಸಹೃದಯರ ಚಿತ್ತದ ಮೇಲೆ ಅಳಿಸಲಾಗದ
ಮುದ್ರೆಯೊತ್ತುತ್ತದೆ. ಯಶೋಧರಚರಿತೆ ಹಾಗೂ
ಅನಂತನಾಥಪುರಾಣದ ಚಂಡಶಾಸನ ಕಥೆ ಕನ್ನಡ
ಸಾಹಿತ್ಯದಲ್ಲಿ ವಿಶಿಷ್ಟ ಸ್ಥಾನ ಪಡೆಯುತ್ತವೆ.
ಸಂಪ್ರದಾಯಬದ್ಧವೂ ಚಿರಪರಿಚಿತವೂ ಆದ
ವಸ್ತುವನ್ನು ಬಿಟ್ಟು, ಕವಿ ವಿಷಮಪ್ರಣಯದ ಎರಡು
ದಿಕ್ಕುಗಳನ್ನು ಚಿತ್ರಿಸಿ ಬದುಕಿನ ವಾಸ್ತವಿಕತೆಗೆ ಕನ್ನಡಿ
ಹಿಡಿದಿದ್ದಾನೆ. ವಿಮರ್ಶಕರೊಬ್ಬರು ಹೇಳುವಂತೆ
ಅದಮ್ಯವಾದ ಕಾಮದ, ಧರ್ಮವಿರುದ್ಧ ಪ್ರಣಯದ
ಸ್ತ್ರೀಮುಖ ಪುರಷ ಮುಖಗಳನ್ನು ಉಜ್ಜ್ವಲವಾಗಿ
ಕ್ರಾಂತಿಕಾರಕ ರೀತಿಯಲ್ಲಿ ಚಿತ್ರಿಸ ಕನ್ನಡ ಸಾಹಿತ್ಯಕ್ಕೆ
ಸ್ವಂತ ಕಾಣಿಕೆ ಸಲ್ಲಿಸಿದ್ದಾನೆ. ಕನ್ನಡ ಸಾಹಿತ್ಯಕ್ಕೆ
ಮಾತ್ರವಲ್ಲ, ಜಾಗತಿಕ ಸಾಹಿತ್ಯಕ್ಕೂ ಬೆಲೆಯುಳ್ಳ
ಕಾಣಿಕೆ ಸಲ್ಲಿಸಿದ್ದಾನೆಂದರೆ ತಪ್ಪಲ್ಲ. ಮಹಾಕಾವ್ಯದ
ಔನ್ನತ್ಯ, ಭವ್ಯತೆಗಳು ಆಂಶಿಕವಾಗಿಯಾದರೂ ಅವನ
ಎರಡು ಕಿರುಗಬ್ಬಗಳಲ್ಲಿ ತಲೆದೋರಿವೆ. ಆದ್ದರಿಂದ,
ಜನ್ನ ಮಹಾಕವಿಗಳ ಸಾಲಿನಲ್ಲಿ ನಿಲ್ಲಲಾರನಾದರೂ
ಮಧ್ಯಮವರ್ಗದ ಕವಿಗಳ ಪಂಕ್ತಿಯಲ್ಲಿ ಅಗ್ರಸ್ಥಾನಕ್ಕೆ
ನಿಸ್ಸಂದೇಹವಾಗಿ ಅರ್ಹನಾಗುತ್ತಾನೆ.
ನೇಮಿಜನ್ನಮರಿರ್ವರೆ ಕರ್ಣಾಟಕೃತಿಗೆ
ಸೀಮಾಪುರುಷರ್ ಎಂಬ ಮಧೂರ ಕವಿಯ ಪ್ರಶಂಸೆ
ಉತ್ಪ್ರೇಕ್ಷೆಯಾದರೂ ಭಾಗಶಃ ಸತ್ಯವೆನ್ನಬಹುದು.[೧೨]
ಗ್ರಂಥ- ನೋಡಿ
ಯಶೋಧರ ಚರಿತೆ (https://kn.wikisource.or
g/s/1i93)
ಉಲ್ಲೇಖಗಳು
1. Sastri (1955), pp. 358–359
2. Kamath (2001), p. 133
3. Nagaraj in Pollock (2003), p. 364
4. Shiva Prakash (1997), p. 204
5. Nagaraj in Pollock (2003), p. 377
6. Sastri (1955), p. 359
7. E.P. Rice (1921), pp. 43–44
8. Sahitya Akademi (1988), p. 1181
9. Sahitya Akademi (1992), p. 4629
10. Nagaraj in Pollock (2003), p. 375
11. Nagaraj in Pollock (2003), p. 375
12. Nagaraj in Pollock (2003), p. 375
"https://kn.wikipedia.org/w/index.php?
title=ಜನ್ನ&oldid=1146447" ಇಂದ ಪಡೆಯಲ್ಪಟ್ಟಿದೆ
ಈ ಪುಟವನ್ನು ೨೦ ಜನವರಿ ೨೦೨೩, ೧೨:೧೫ ರಂದು
ಕೊನೆಯಾಗಿ ಸಂಪಾದಿಸಲಾಯಿತು. •
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA
4.0 " ರಡಿ ಲಭ್ಯವಿದೆ.