Professional Documents
Culture Documents
ಸರ್ವೆಪಲ್ಲಿ ರಾಧಾಕೃಷ್ಣನ್ - ವಿಕಿಪೀಡಿಯ
ಸರ್ವೆಪಲ್ಲಿ ರಾಧಾಕೃಷ್ಣನ್ - ವಿಕಿಪೀಡಿಯ
ಸರ್ವೆಪಲ್ಲಿ ರಾಧಾಕೃಷ್ಣನ್
ಜನ್ಮ ದಿನಾಂಕ: ೫ ಸೆಪ್ಟೆಂಬರ್ ೧೮೮೮
ಪರಿಚಯ
ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ , (ಜನನ
ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ
ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ
ಪ್ರಮುಖರಾಗಿದ್ದಾರೆ. ಅವರು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ (೧೯೦೫-೧೯೦೬) ಶಿಕ್ಷಣ
ಪಡೆದಿದ್ದರು. ಶಿಕ್ಷಕರಾಗಿದ್ದ 'ಡಾ. ಸರ್ವಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ
ರಾಷ್ಟ್ರಪತಿಯಾಗಿದ್ದರು. ಇವರು ಒಬ್ಬ ಶಿಕ್ಷಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.
ವಿವಾಹ
ವೆಲ್ಲೂರಿನಲ್ಲಿರುವಾಗಲೇ ಕೇವಲ ೧೬ ನೇ ವಯಸ್ಸಿನಲ್ಲಿ ಶಿವಕಾಮಮ್ಮ ಎಂಬುವವರನ್ನು
ಬಾಳಸಂಗಾತಿಯನ್ನಾಗಿಸಿಕೊಂಡ ರಾಧಾಕೃಷ್ಣನ್, ೧೯೦೯ ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕ
ಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ ಸೇವೆ ಯನ್ನಾರಂಭಿಸಿದರು.[೨]
ಮಹಾ ಶಿಕ್ಷಕನಾಗಿ
ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ
ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ
ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ
ಮುನ್ನಡೆದರು.
ರಾಧಾಕೃಷ್ಣನ್ 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದ
ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು
ಹರಿತವಾದ ವಿಚಾರಗಳನ್ನು ಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿ ಫಿಲಾಸಫಿ ಆಫ್
ರವೀಂದ್ರನಾಥ್ ಠ್ಯಾಗೋರ್' ಎಂಬ ಮೊದಲ ಪುಸ್ತಕ ಬರೆದರು. ಇವರು ತೆಲುಗಿನಲ್ಲಿ ತಮ್ಮ ಸಹಿಯನ್ನು
"ರಾಧಾಕ್ರಿಶ್ಣಯ್ಯ"ಎಂದು ಹಾಕುತಿದ್ದರು. ಮೈಸೂರಿನಲ್ಲಿ ಇವರ ಹೆಸರಿನ ರಸ್ತೆಯೊಂದಿದೆ.[೩]
ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ
ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ
ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ [ಸೆಪ್ಟೆಂಬರ್
೫]ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ.
ಆಗ ರಾಧಾಕೃಷ್ಣನ್ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ
ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ
ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು
ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು
ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ
ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು
ನೆನೆಸಿಕೊಳ್ಳುತ್ತಿದ್ದರು.
ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ 'ಫಿಲಾಸಫಿ ಆಫ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್' ಪುಸ್ತಕ
ಬಿಡುಗಡೆಗೊಂಡಿತು. 'ಡಾ. ರಾಜೇಂದ್ರ ಪ್ರಸಾದ್' ನಂತರ, ೧೯೬೨ ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ
ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ
ಶ್ರಮಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಬಂಧಗಳನ್ನು ಉನ್ನತೀಕರಣಗೊಳಿಸುತ್ತಾ, ದೇಶದೊಳಗಿನ ಆಂತರಿಕ
ಕಲಹಗಳಿಗೆ ತಿಲಾಂಜಲಿ ನೀಡುತ್ತಾ, ದೇಶವನ್ನು ಸುಭಿಕ್ಷವಾಗಿಸಿದ ಕೀರ್ತಿ 'ಡಾ.ರಾಧಾ ಕೃಷ್ಣನ್' ಅವರಿಗೆ ಸಲ್ಲುತ್ತದೆ.
ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ ತಾವೊಬ್ಬ ಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು
ತಮ್ಮ ಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿ ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು
ಶಿಕ್ಷಣೇತರ ಸುಧಾರಣೆಗಳನ್ನು ಕಂಡಿತು.
೧೯೩೯ ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ
ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ
ರಾಧಾಕೃಷ್ಣನ್ ಅವರನ್ನು, ೧೯೪೮ ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ
ನೇಮಿಸಿತು. ೧೯೪೯ ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್,
ಸ್ಟಾಲಿನ್ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.
ಬಿರುದುಗಳು
ಬಿರುದುಗಳು
1. ಬ್ರಿಟನ್ ಆಕ್ಸ್ ಫಾರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೨ ),
7. "ಟೆಂಪಲ್ಟನ್"ಪ್ರಶಸ್ತಿ ೧೯೭೩ರಲ್ಲಿ.
ನಿಧನ
ತಮ್ಮ 'ರಾಷ್ಟ್ರಪತಿ ಹುದ್ದೆ'ಯ ಅಧಿಕಾರಾವಧಿ ಮುಗಿದ ನಂತರ ೧೯೬೭ ರಲ್ಲಿ ತಮ್ಮ 'ನಿವೃತ್ತಿ ಜೀವನ'ವನ್ನು ಮದ್ರಾಸಿನ
'ಮೈಲಾಪುರ'ದಲ್ಲಿರುವ ತಮ್ಮ ಅಧಿಕೃತ ನಿವಾಸ 'ಗಿರಿಜಾ'ದಲ್ಲಿ ಕಳೆದ ರಾಧಾಕೃಷ್ಣನ್, ೧೯೭೫ ರ ಏಪ್ರಿಲ್ ೧೭ ರಂದು
ಇಹಲೋಕ ತ್ಯಜಿಸಿದರು
ಉಲ್ಲೇಖಗಳು
ಬಾಹ್ಯ ಕೊಂಡಿಗಳು
"https://kn.wikipedia.org/w/index.php?
title=ಸರ್ವೆಪಲ್ಲಿ_ರಾಧಾಕೃಷ್ಣನ್&oldid=1085708" ಇಂದ
ಪಡೆಯಲ್ಪಟ್ಟಿದೆ